
ಅವಿಭಜಿತ ಜಿಲ್ಲೆಯ ಜನರ ಸಂಸ್ಕೃತಿ ಪ್ರೀತಿ ಇತರರಿಗೂ ಮಾದರಿ
–ನಿವೃತ್ತ ಜಿಲ್ಲಾಧಿಕಾರಿ ಡಾ. ಮುದ್ದು ಮೋಹನ್




ಕಾರ್ಕಳ : ಅವಿಭಜಿತ ದ.ಕ. ಜಿಲ್ಲೆಯ ಜನತೆ ಕಲೆ, ಸಂಸ್ಕೃತಿ, ಸಂಗೀತವನ್ನು ಆರಾಧಿಸುವವರಾಗಿದ್ದು ಕಲಾವಿದರಿಗೆ ಅವರು ನೀಡುವ ಗೌರವ, ಪ್ರೋತ್ಸಾಹ ಬೇರೆಲ್ಲೂ ಕಾಣಸಿಗದು. ಈ ಜಿಲ್ಲೆಯ ಜನರ ಪ್ರೀತಿ, ಹೃದಯ ಶ್ರೀಮಂತಿಕೆಗೆ ನಾನು ಮಾರು ಹೋಗಿದ್ದೇನೆ ಎಂಬುದಾಗಿ ಕರ್ನಾಟಕ ಕಲಾಶ್ರೀ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ನಿವೃತ್ತ ಜಿಲ್ಲಾಧಿಕಾರಿ ಡಾ. ಮುದ್ದು ಮೋಹನ್ ಅಭಿಮತ ವ್ಯಕ್ತಪಟಿಸಿದರು.
ಕಾಂತಾವರ ಕನ್ನಡ ಸಂಘದ ೫೦ರ ಸಂಭ್ರಮದ ಪ್ರಯುಕ್ತ ಕಾರ್ಕಳದ ಶಾಸ್ತ್ರೀಯ ಸಂಗೀತ ಸಭಾದ ಸಹಯೋಗದಲ್ಲಿ ಅವರಿಂದ ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಭವನದಲ್ಲಿ ಆಯೋಜಿಸಲಾಗಿದ್ಧ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮಕ್ಕೆ ಮುನ್ನ ಮಾತನಾಡಿದರು.
ಶಾಸ್ತ್ರೀಯ ಸಂಗೀತ ಸಭಾ ಇದರ ಸ್ಥಾಪಕ ಕಾರ್ಯದರ್ಶಿ ಡಾ. ಪ್ರಕಾಶ್ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


































