ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆಯಿತು.
13 ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡು, 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಘೋಷಿಸಿದರು.
ಪಕ್ಷೇತರ ಅಭ್ಯರ್ಥಿಗಳಾದ ಕೆ.ಆರ್ ಕುಸುಮ, ರಾಜ್ ಬಲ್ಲಾಳ್ ಹಾಗೂ ಹೆಚ್ .ಸುರೇಶ್ ಪೂಜಾರಿ ಅವರ ನಾಮಪತ್ರಗಳು ತಿರಸ್ಕಾರಗೊಂಡಿವೆ.








































