ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ. ಅಂಜಾರಿಯಾ ಫೆ. 25 ಭಾನುವಾರದಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ವೆಂದ್ ಗೆಹೋತ್ ಸೂತನ ಸಿಜೆಐಗೆ ಪ್ರಮಾಣ ವಚನ ಬೋಧನೆ ಮಾಡಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಉಪಸ್ಥಿತರಿದ್ದರು.
ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು.
2011 ನವೆಂಬರ್ 21 ರಿಂದ, ನ್ಯಾಯಮೂರ್ತಿ ಅಂಜಾರಿಯಾ ಅವರು ಗುಜರಾತ್ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಸ್ತುತ ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯಾಗಿರುವ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ ತಿಂಗಳು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕೊಲಿಜಿಯಂ ಎನ್.ವಿ.ಅಂಜಾರಿಯಾ ಅವರನ್ನು ಶಿಫಾರಸು ಮಾಡುತ್ತಿದೆ ಎಂದು ಬಹಿರಂಗಪಡಿಸಿದೆ.




































