ಕ್ಷತ್ರಿಯ ಮರಾಠ ಸಮಾಜ: ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರ

Picture of RB NEWS

RB NEWS

Bureau Report

ಕಾರ್ಕಳ : ಕ್ಷತ್ರಿಯ ಮರಾಠ ಸಮಾಜ ರಿ. ಕಾರ್ಕಳ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕ್ಷತ್ರೀಯ ಮರಾಠ ಸಮಾಜದ ಅದ್ಯಕ್ಷರಾದ ಶುಭದರಾವ್ ಅದ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮವನ್ನು ಕ್ಷತ್ರೀಯ ಮರಾಠ ಸಮಾಜದ ಹಿರಿಯರಾದ ಉಮೇಶ್ ರಾವ್ ಬಜಗೋಳಿ ಉದ್ಘಾಟಿಸಿದರು.

ಸಮಾಜದ 150 ವಿದ್ಯಾರ್ಥಿಗಳಿಗೆ ರೂ 1 ಲಕ್ಷದ 60 ಸಾವಿರ ವಿದ್ಯಾರ್ಥಿ ವೇತನ, ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 18 ವಿದ್ಯಾರ್ಥಿಗಳಿಗೆ ಸನ್ಮಾನ, ಮತ್ತು ಪ್ರಾಥಮಿಕ ವಿಭಾಗದ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಿಸಲಾಯಿತು.

ಈ ಸಂದರ್ಬದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ್ ಗಣೇಶ್ ರಾವ್ ಕವಡೆ, ಜಾನ್ ದೇವ್ ವೀಡೆ, ಗುಣಪ್ರಕಾಶ್, ಮೊದಲಾದವರು ಉಪಸ್ಥಿತರಿದ್ದರು.
ಸಾಯಂಕಾಲ ನಡೆದ ಸಮಾರೋಪ ಸಮಾರಂಭದಲ್ಲಿ ವಿದ್ಯಾದಾನಿಗಳಾದ ಡಾ. ಸುಮತಿ ಪವಾರ್, ಪ್ರಕಾಶ್ ಪವಾರ್ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರ ನಡೆಸಿಕೊಟ್ಟ ಜೇಸಿ ರಾಜೇಂದ್ರ ಭಟ್ ಮೊದಲಾದವರನ್ನು ಗೌರವಿಸಲಾಯಿತು. ಶಿಕ್ಷಕರಾದ ಹರೇಂದ್ರ ರಾವ್ , ಕೃಷ್ಣ ರಾವ್ ಸಂದರ್ಬೋಚಿತ ಮಾತನಾಡಿ ಶುಭ ಹಾರೈಸಿದರು ಮಾಜಿ ಪುರಸಬಾ ಸದಸ್ಯ ಶಿವಾಜಿ ರಾವ್ ಜಾದವ್ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top