ಕಾರ್ಕಳ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಘೋಷಣೆಯಾದ ಹಿನ್ನಲೆಯಲ್ಲಿ ಕಾರ್ಕಳ ತಾಲೂಕಿನ ಸಾಣೂರು, ರೆಂಜಾಳ, ಈದು, ನಲ್ಲೂರು, ಮಾಳ ಮತ್ತು ಹೆಬ್ರಿ ತಾಲೂಕಿನ ಸೋಮೇಶ್ವರ ಹಾಗೂ ಕುಂದಾಪುರ ತಾಲೂಕಿನ ಹಾಲಾಡಿ, ಹೊಸಂಗಡಿ, ಸಾಯಿಬ್ರಕಟ್ಟೆ ಯಲ್ಲಿ ತೆರೆಯಲಾದ ಚೆಕ್ ಪೋಸ್ಟ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ನೇತೃತ್ವದಲ್ಲಿ ಭೇಟಿ ನೀಡಿ ಪರಿಶೀಲಿಸಲಾಯಿತು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ, ಕಾರ್ಕಳ ತಹಶೀಲ್ದಾರ್, ಆರ್.ಓ ಔದ್ರಾಮ ಮೊದಲಾದವರು ಜೊತೆಯಲ್ಲಿ ಇದ್ದರು.
































