ತಮಿಳುನಾಡಿನ ಕೃಷ್ಣಗಿರಿ: ಸ್ಪರ್ಧಾ ಕಣದಲ್ಲಿ ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿ

Picture of RB NEWS

RB NEWS

Bureau Report

ಚೆನ್ನೈ: ತಮಿಳುನಾಡು ಹಾಗೂ ಕರ್ನಾಟಕದ ಭಾಗಗಳಲ್ಲಿ ಭೀತಿ ಮೂಡಿಸಿದ್ದ ದಂತಚೋರ ವೀರಪ್ಪನ್ ಅವರ ಪುತ್ರಿ ವಿದ್ಯಾರಾಣಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಅವರು ನಾಮ್ ತಮಿಳರ್ ಕಚ್ಚಿಯ ಅಭ್ಯರ್ಥಿಯಾಗಿ ಎಪ್ರಿಲ್ 19ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.

ವೃತ್ತಿಯಲ್ಲಿ ವಕೀಲೆಯಾಗಿರುವ ವಿದ್ಯಾ ರಾಣಿ, ಜುಲೈ 2020ರಲ್ಲಿ ಬಿಜೆಪಿಯನ್ನು ಸೇರ್ಪಡೆಯಾಗಿದ್ದರು. ಅವರನ್ನು ರಾಜ್ಯ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಿಸಲಾಗಿತ್ತು.

ಬಿಜೆಪಿಯನ್ನು ತೊರೆದಿದ್ದ ವಿದ್ಯಾ ರಾಣಿ, ಇತ್ತೀಚೆಗೆ ನಟ, ನಿರ್ದೇಶಕ ಸೀಮನ್ ನೇತೃತ್ವದ ನಾಮ್ ತಮಿಳ‌ರ್ ಕಚ್ಚಿ ಪಕ್ಷವನ್ನು ಸೇರ್ಪಡೆಯಾಗಿದ್ದರು.

ಸಾರ್ವಜನಿಕ ಸಭೆಯೊಂದರಲ್ಲಿ ತಮಿಳುನಾಡು ಮತ್ತು ಪುದುಚೇರಿಯಿಂದ ಸ್ಪರ್ಧಿಸುತ್ತಿರುವ ಎಲ್ಲ 40 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಸೀಮನ್, “ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ನಾಮ್ ತಮಿಳ‌ರ್ ಕಚ್ಚಿ ಪಕ್ಷದ ಅಭ್ಯರ್ಥಿಯಾಗಿ ವಿದ್ಯಾ ರಾಣಿ ಸ್ಪರ್ಧಿಸಲಿದ್ದಾರೆ” ಎಂದು ಪ್ರಕಟಿಸಿದರು.

ಎಲ್ಟಿಟಿಇ ನಾಯಕ ದಿ. ವೇಲುಪಿಳ್ಳೆ ಪ್ರಭಾಕರನ್ ಪರವಾಗಿ ಸಹಾನುಭೂತಿ ಹೊಂದಿರುವ ಹಾಗೂ ವಿವಾದಾತ್ಮಕ ಸೈದ್ಧಾಂತಿಕ ಹೊಂದಿರುವ ನಾಮ್ ತಮಿಳ‌ರ್ ಕಚ್ಚಿ ಪಕ್ಷದಿಂದ ಸ್ಪರ್ಧಿಸುತ್ತಿರುವ 40 ಮಂದಿ ಅಭ್ಯರ್ಥಿಗಳ ಪೈಕಿ ಅರ್ಧದಷ್ಟು ಮಂದಿ ಮಹಿಳೆಯರೇ ಆಗಿದ್ದು, ಪುರುಷರಷ್ಟೇ ಮಹಿಳೆಯರು ಸಮ ಎಂದು ತೋರ್ಪಡಿದಿದ್ದಾರೆ.‌

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top