ಕಾರ್ಕಳ: ನಕ್ಸಲ್ ಪೀಡಿತ ಪ್ರದೇಶವೆಂದು ಗುರುತಿಸಲಾಗಿರುವ ಈದು ಪರಿಸರದಲ್ಲಿ ಬೋನಿಗೆ ಚಿರತೆ ಸೆರೆ ಸಿಕ್ಕಿದೆ.
ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯ ಕಾಟ ಹೆಚ್ಚಳವಾದ ಹಿನ್ನಲೆಯಲ್ಲಿ ಈದು ಶಾಲೆಯೊಂದರ ಬಳಿ ಚಿರತೆ ಬೋನ್ ಇಡಲಾಗಿತ್ತು.
ಶನಿವಾರ ಬೆಳಿಗ್ಗೆ ಬೋನಿಗೆ ಚಿರತೆ ಸೆರೆ ಸಿಕ್ಕಿತು.

ಬೋನಿಗೆ ಬಿದ್ದ ಚಿರತೆಯನ್ನು ಕಾರ್ಕಳ ಅರಣ್ಯ ಇಲಾಖೆಗೆ ಸಾರ್ವಜನಿಕರು ಹಸ್ತಾಂತರಿಸಿದ್ದಾರೆ.






































