ನಾಟಕೀಯ ರಾಜಕಾರಣ ಮಾಡುತ್ತಿರುವ ಕಾರ್ಕಳ ಕಾಂಗ್ರೆಸ್‌ನ ನಿಲುವು ನಾಚಿಕೆಗೇಡು–ಮಹಾವೀರ ಹೆಗ್ಡೆ

Picture of RB NEWS

RB NEWS

Bureau Report

ಕಳೆದ 1 ವರ್ಷದಿಂದ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಬಿಡುಗಡೆ ಮಾಡದ ಕಾಂಗ್ರೆಸ್ ಸರಕಾರ ಮುಳುಗುತ್ತಿರುವ ಟೈಟಾನಿಕ್ ಹಡಗಿನಂತೆ ಆಗುತ್ತಾ ಸಾಗುತ್ತಿದೆ. ಸರಕಾರ ದಿವಾಳಿ ಆಗುವ ಲಕ್ಷಣ ಕಾಣುತ್ತಿದೆ.

ಆದರೆ ಇವೆಲ್ಲವನ್ನೂ ಮರೆ ಮಾಚಿ ನಾಟಕ ಆಡುತ್ತಿರುವ ಕಾಂಗ್ರೆಸ್ ಪಕ್ಷ ತಮ್ಮ ವೈಫಲ್ಯ ಮರೆ ಮಾಚಲು ಕಾರ್ಕಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾದ ಸುನಿಲ್ ಕುಮಾರ್ ರ ಸಾಧನೆಯನ್ನು ಅವಹೇಳನ ಮಾಡಲು ಹೊರಟಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.

ಸುನಿಲ್ ಕುಮಾರ್ ಅವಧಿಯಲ್ಲಿ ಕಾರ್ಕಳ ತಾಲೂಕಿನ ಪ್ರತಿ ಗ್ರಾಮೀಣ ಮಟ್ಟಕ್ಕೂ ರಸ್ತೆ ಆಗಿದೆ. ಅದು ಕೂಡ ಕಾಂಕ್ರೀಟ್ ನದ್ದು. ಕಿಂಡಿ ಆಣೆಕಟ್ಟುಗಳಾಗಿವೆ. ಸಾವಿರಾರು ಮಂದಿ ಈ ಅನುದಾನಗಳ ಫಲಾನುಭವಿಗಳಾಗಿದ್ದಾರೆ. ಆದರೆ ಇದರ ಬಗ್ಗೆ ಮಾತನಾಡದ ಕಾಂಗ್ರೆಸ್ ನಾಟಕೀಯದ ರಾಜಕೀಯ ಮಾಡಲು ಹೊರಟಿರುವುದು ನಾಚಿಕೆಗೇಡಿನ ವಿಚಾರ ಎಂದು ಹೇಳಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top