ಬೆಳಗಾವಿ ನ್ಯಾಯಾಲಯದ ಆವರಣದಲ್ಲಿ ಪಾಕ್ ಪರ ಘೋಷಣೆ; ವಿಚಾರಣಾಧೀನ ಕೈದಿ ಜಯೇಶ್ ಪೂಜಾರಿಗೆ ಸಾರ್ವಜನಿಕರಿಂದ ತಪರಾಕಿ

Picture of RB NEWS

RB NEWS

Bureau Report

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದ ಆರೋಪಿಯೋರ್ವ ನ್ಯಾಯಾಲಯದ ಆವರಣದಲ್ಲೇ ಪಾಕ್ ಪರ ಘೋಷಣೆ ಕೂಗಿದ ಆರೋಪ ಬೆಳಗಾವಿಯಲ್ಲಿ ಇಂದು ಕೇಳಿ ಬಂದಿದೆ.

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿ ಜಯೇಶ್ ಪೂಜಾರಿ ಎಂಬಾತ ಈ ಘೋಷಣೆ ಕೂಗಿದ್ದಾನೆ ಎಂದು ಹೇಳಲಾಗಿದೆ. ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ.

ಜೈಲಿನಲ್ಲಿದ್ದುಕೊಂಡೇ ಐಪಿಎಸ್ ಅಧಿಕಾರಿ ಅಲೋಕ್ ಕುಮಾ‌ರ್ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top