ಮಂಗಳೂರು: ಉದ್ಯಮಿಯೊಬ್ಬರಿಂದ ರೂ. 25 ಲಕ್ಷ ಬಹುದೊಡ್ಡ ಬೇಡಿಕೆಯಲ್ಲಿ ಲಂಚ ಸ್ವೀಕರಿಸಿದ ಮಂಗಳೂರು ಮೂಡಾಕ್ಕೆ ಕಪ್ಪು ಚುಕ್ಕಿ ಇಟ್ಟು ಲೋಕಾಯುಕ್ತ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾದ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಅಲಿ ಮತ್ತು ದಲ್ಲಾಳಿ ಮುಹಮ್ಮದ್ ಸಲೀಂಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಟಿಡಿಆರ್ಗೆ ಸಂಬಂಧಿಸಿದಂತೆ ಮಾ.23ರಂದು ನಗರದ ಮಂಗಳಾ ಕ್ರೀಡಾಂಗಣದ ಬಳಿ ದಲ್ಲಾಳಿಯ ಮೂಲಕ ಉದ್ಯಮಿಯಿಂದ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.





































