ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ

Picture of RB NEWS

RB NEWS

Bureau Report

ಕಾಂತಾವರ : ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ

ಎಪ್ರಿಲ್19 ರಿಂದ 22 ರವರೆಗೆ ಜರಗಲಿರುವ ಬ್ರಹ್ಮಕಲಶೋತ್ಸವ.

ಕಾಂತಾವರ: ಶ್ರೀ ಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಜರಗುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು.

ಸಂಗೀತ ನಿರ್ದೇಶಕ ಪ್ರಮೋದ್ ಸಪ್ರೆ ರಚಿಸಿ, ಡಾ. ರಮೇಶ್ಚಂದ್ರ ಹಾಡಿರುವ ಕ್ಷೇತ್ರದ ಮಹಾಮ್ಮಾಯಿ ಅಮ್ಮನವರ ಸ್ತುತಿಸುವ ಧ್ವನಿಸುರುಳಿಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕಾನಂದ ಶೆಟ್ಟಿ ಬೇಲಾಡಿಬಾವ ಬಿಡುಗಡೆಗೊಳಿಸಿದರು.

ಇದೇ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನದಾಸ ಅಡ್ಯಂತಾಯ ಬೇಲಾಡಿ, ಸಂಗೀತ ನಿರ್ದೇಶಕ ಪ್ರಮೋದ್ ಸಪ್ರೆ ಕಾಂತಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನಕಾರ್ಯದರ್ಶಿ ಪ್ರಶಾಂತ್ ಕುಮಾರ್ ಪಾಲಡ್ಕ, ಕ್ಷೇತ್ರ ಅರ್ಚಕ ಗಣೇಶ್ ಕೇಪ್ಲಾಜೆ, ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷ ಜಯ.ಸಿ ಅಂಚನ್ ಮೈಂದಬೆಟ್ಟು, ಕೋಶಾಧಿಕಾರಿ ರಂಜಿತ್ ಶೆಟ್ಟಿ ಪುಂಚಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕರುಣಾಕರ ಶೆಟ್ಟಿ ಬಾರಾಡಿ, ಬ್ರಹ್ಮಕಲಶೊತ್ಸವದ ಮಾಧ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ಶಿವಪ್ರಸಾದ್ ಶೆಟ್ಟಿ ಕೆಲ್ಲಬೆಟ್ಟು ಪರಾರಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು‌ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top