[t4b-ticker]

ಸಿದ್ರಾಮುಲ್ಲಾ ಖಾನ್‌ ಎಂದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್

Picture of RB NEWS

RB NEWS

Bureau Report

ಕಾರವಾರ: ಲೋಕಸಭಾ ಚುನಾವಣೆ ಎದುರಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧವಾಗಿ ವಾಗ್ದಾಳಿ ನಡೆಸುವ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮೊಟೋ ಕೇಸ್) ದಾಖಲಿಸಲಾಗಿದೆ.

ಮುಂಡಗೋಡದಲ್ಲಿ ಫೆ.23ರಂದು ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ, ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೋರಾಟಕ್ಕೆ ತಿರುಗೇಟು ನೀಡುವ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ದೇಶದಲ್ಲಿ 99.9% ಹಿಂದೂಗಳು ತೆರಿಗೆ ಕಟ್ಟುತ್ತಾರೆ. ಮುಸ್ಲಿಮರ ಮಸೀದಿಗೆ ಯಾಕೆ ಅನುದಾನ ಕೊಟ್ರಿ? ಸಿದ್ರಾಮುಲ್ಲಾ ಖಾನ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ವಾಗ್ದಾಳಿ ನಡೆಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್‌ ಎಂದಿದ್ದಕ್ಕೆ ಕೇಸ್ ದಾಖಲಿಸಿದ್ದು, ಈ ಹಿನ್ನೆಲೆ ಮುಂಡಗೋಡ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top