ಕಾರ್ಕಳ : ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕರಾವಳಿಯ ಸೃಷ್ಟಿಕರ್ತನೆಂದೆ ಕರೆಯಲ್ಪಡುವ ಶ್ರೀ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ.(ರಿ) ಎಂಬ ಸಮಿತಿಯು ಮಾರ್ಚ್ 18ರಂದು ಅಸ್ತಿತ್ವಕ್ಕೆ ಬಂದಿರುತ್ತದೆ.
ಸಮಿತಿಯ ಮೊದಲ ಸಭೆಯು ಮಾರ್ಚ್ 25 ಸೋಮವಾರದಂದು ಉಡುಪಿಯ ಮಥುರಾ ಹೋಟೆಲಿನಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಕೆ ಕೃಷ್ಣಮೂರ್ತಿ ಆಚಾರ್ಯ ಮತ್ತು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಯವರ ನೇತೃತ್ವತ್ವದಲ್ಲಿ ನಡೆಯಿತು. ಸಮಿತಿಯ ಸಲಹೆಗಾರರಾದ ವಿಶ್ವಾಸ್ ವಿ ಅಮೀನ್, ಉಪಾಧ್ಯಕ್ಶರಾದ ನಲ್ಲೂರು ಪ್ರದೀಪ್ ಶೆಟ್ಟಿ , ಬೆಳುವಾಯಿಯ ನಿತಿನ್ ಪೂಜಾರಿ ರವರು , ಪ್ರಧಾನ ಕಾರ್ಯದರ್ಶಿಯವರಾದ ಕಾಂತಾವರದ ಪ್ರದೀಪ್ ಕುಲಾಲ್,ಜತೆ ಕಾರ್ಯದರ್ಶಿವರಾದ ಬೋಳದ ಸಂತೋಷ ರವರ ಜೊತೆ ಕೋಶಾಧಿಕಾರಿಯಾದ ಹವಾಲ್ದಾರ್ ಬೆಟ್ಟು ಶಶಿಧರ ರವರು ಉಪಸ್ಥಿತರಿದ್ದರು. ಹಾಗೂ ಸಮಿತಿಯ ಸದಸ್ಯರಾದ ಪೆರ್ಡೂರು ನವೀನ್ ಸಾಲಿಯಾನ್, ಚೇರ್ಕಾಡಿಯ ವಿಘ್ನೇಶ್, ಕಡ್ತಲದ ಹರೀಶ್ ಪೂಜಾರಿ, ಹೆಬ್ರಿ ಚಾರದ ದಿನೇಶ್ ಕುಮಾರ್ ಮತ್ತು ಮರ್ಣೆ ರಾಜೇಶ್ ಶೆಟ್ಟಿಯವರು ಸಭೆಯಲ್ಲಿದ್ದು ಸಮಿತಿಯ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಮುಂಬರುವ ದಿನಗಳಲ್ಲಿ ಥೀಮ್ ಪಾರ್ಕ್,ನಲ್ಲಿ ಪರಶುರಾಮನ ಪ್ರತಿಮೆಯನ್ನು ಪುನರ್ ಸ್ಥಾಪನೆ ಮಾಡುವಲ್ಲಿ ಹಾಗೂ ಈ ಬಗ್ಗೆ ಜನಜಾಗೃತಿ ಮೂಡಿಸುವಲ್ಲಿ ಸಮಿತಿಯ ಪಾತ್ರಗಳ ಬಗ್ಗೆ ಹಾಗೂ ಸಮಿತಿಯ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಮಿತಿಯ ಗೌರವಾಧ್ಯಕ್ಷರಾದ ಕೆ.ಕೃಷ್ಣಮೂರ್ತಿ ಆಚಾರ್ಯರವರು ತಮ್ಮ ಭಾಷಣದಲ್ಲಿ ತಿಳಿಸಿದರು.


ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿರವರು ಈ ಬಗ್ಗೆ ಯಾವ ರೀತಿಯಲ್ಲಿ ಮುಂದಿನ ದಿನಗಳು ನಿರ್ಣಾಯಕಯಕವಾಗಿದ್ದು ಸಭೆಯು ಕರಾವಳಿ ಜಿಲ್ಲೆಯ ಪ್ರತೀ ತಾಲೂಕು ಹಾಗೂ ಗ್ರಾಮಮಟ್ಟದಿಂದ ಹಿಂದೂ ಧರ್ಮ ಹಾಗೂ ಹಿಂದೂಗಳ ದೇವರು ಹಾಗೂ ವಿಷ್ಣುವಿನ ದಶಾವತಾರಗಳಲ್ಲೊಂದಾದ ಪರಶುರಾಮ ದೇವರ ಬಗೆಗೆ ನೆಡೆಯಬೇಕಾದ ಜಾಗೃತಿ ಹಾಗೂ ಸನಾತನ ಧರ್ಮದ ರಕ್ಷಣೆ ಹಾಗೂ ಅಗತ್ಯತೆ ಬಗ್ಗೆ ತಿಳಿಸಿದರು. ಸಭೆಯಲ್ಲಿ ಸಮಿತಿಯ ಸದಸ್ಯರು ಸೂಕ್ತ ರೀತಿಯಲ್ಲಿ ಅಧಿಕಾರಿಗಳ ಜೊತೆ, ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸರಕಾರದ ಮಟ್ಟದಲ್ಲಿ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚಿಸಿದರು ಪ್ರಧಾನ ಕಾರ್ಯದರ್ಶಿಯವರಾದ ಕಾಂತಾವರದ ಪ್ರದೀಪರವರು ಸಭೆಯ ಕೊನೆಯಲ್ಲಿ ವಂದನಾ ನಿರ್ಣಯ ಕೈಗೊಂಡರು.



































