ಮೂಡುಬಿದಿರೆ : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ನಲ್ಲಿ ತುಳುನಾಡ ಜಾತ್ರೆ, ಒಡಿಯೂರು ರಥೋತ್ಸವ ಅಂಗವಾಗಿ ನಡೆದ ‘ಸಿರಿಧಾಮ’ ತುಳು ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಮಕ್ಕಳ ತಜ್ಞರಾದ ಡಾ.ಸುಧಾಕರ ಶೆಟ್ಟಿ ಅವರು ‘ತುಳುನಾಡಿನಲ್ಲಿ ಮಕ್ಕಳ ಅಪೌಷ್ಟಿಕತೆಯಿಂದಾಗುವ ಆತಂಕ, ಅದರ ಪತ್ತೆ ಹಾಗೂ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಒಡಿಯೂರು ಕ್ಷೇತ್ರದ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ವಿರಾರ್ ಶಂಕರ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







































