[ಮೂಡುಬಿದಿರೆ: ವೇಣೂರಿನ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಧಾರ್ಮಿಕ ಕಾರ್ಯಕ್ರಮದಲ್ಲಿ ಮೈಸೂರು ಮಹಾಸಂಸ್ಥಾನದ ಮೈಸೂರು ಅರಮನೆಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಕಲಶಾಭಿಷೇಕ ನೆರವೇರಿಸಿದರು.
ಮೂಡುಬಿದಿರೆ ಗುರುಗಳ ಬಸದಿ ಹಾಗೂ ಶ್ರೀ ದಿಗಂಬರ ಜೈನ ಮಠದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ವರದಿ :ವಿ.ಕೆ.ವಾಲ್ಪಾಡಿ ಚಿತ್ರಗಳು: ವಿ.ಕೆ.ವಾಲ್ಪಾಡಿ, ರತನ್ ಬಾರಾಡಿ








































